ದೋಣಿ ದುರಂತ: ಗೌತಮಿ ನದಿಯಲ್ಲಿ ದೋಣಿ ಮುಳುಗಿ 2 ಸಾವು, 5 ವಿದ್ಯಾರ್ಥಿಗಳು ನಾಪತ್ತೆ!

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌತಮಿ ನದಿಯಲ್ಲಿ ದೋಣಿ ದುರಂತ ಸಂಭವಿಸಿದ್ದು 2 ಜಲಸಮಾಧಿಯಾಗಿದ್ದು ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ...
ದೋಣಿ ದುರಂತ
ದೋಣಿ ದುರಂತ
ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌತಮಿ ನದಿಯಲ್ಲಿ ದೋಣಿ ದುರಂತ ಸಂಭವಿಸಿದ್ದು 2 ಜಲಸಮಾಧಿಯಾಗಿದ್ದು ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 
ನಾಡದೋಣಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ. ಇನ್ನು ದೋಣಿ ದುರಂತದಲ್ಲಿ 2 ಮೃತಪಟ್ಟಿದ್ದು 5 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 
ದೋಣಿ ದುರಂತ ಸಂಭವಿಸುತ್ತಿದ್ದಂತೆ ರಾಷ್ಟ್ರೀಯ ವಿಕೋಪ ಪ್ರತಿಸ್ಪಂದನಾ ಪಡೆ(ಎನ್ಡಿಆರ್ಎಫ್) ಹಾಗೂ ರಾಜ್ಯ ವಿಕೋಪ ನಿರ್ವಹಣಾ ಪಡೆಗಳ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. 
ದೋಣಿ ಮುಳುಗುತ್ತಿದ್ದಂತೆ 10 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಜಿಲ್ಲಾಡಳಿತಕ್ಕೆ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com