ಕೊಲ್ಕೊತಾ ಮೂಲದ ವಕೀಲ ಸುಮೀತ್ ಚೌಧುರಿ ಸಲ್ಲಿಸಿದ ತಮ್ಮ ಅರ್ಜಿಯಲ್ಲಿ, ತರೂರ್ ಅವರು ತಮ್ಮ ಹೇಳಿಕೆ ಮೂಲಕ ದೇಶದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ಇದರಿಂದ ದೇಶದಲ್ಲಿ ಘರ್ಷಣೆ ಹಾಗೂ ಸಾಮರಸ್ಯ ಕೊರತೆಯಾಗುತ್ತಿದೆ ಇದರಿಂದ ಧರ್ಮ ಒಡೆಯಲು ಕಾರಣವಾಗಿದೆ ಎಂದು ಹೇಳಿದ್ದಾರೆ.