ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್

ಕಾಂಗ್ರೆಸ್ ಓಲೈಕೆ ರಾಜಕಾರಣದಿಂದ ಭಾರತಕ್ಕೆ ಹಾನಿ: ಬಿಜೆಪಿ

ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ಮತ್ತೆ ಕಾಂಗ್ರೆಸ್...
ನವದೆಹಲಿ: ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ಮತ್ತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆ ಪ್ರತಿಪಕ್ಷ ಕೋಮುವಾದಿ ಮತ್ತು ವಿಭಜನೆ ಮಾಡುವ ಪಕ್ಷ ಎಂಬುದನ್ನು ತೋರಿಸುತ್ತದೆ ಎಂದಿದೆ.
ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡಕರ್ ಅವರು, ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ನ ವಿಭಜನೆ ಮಾಡುವ ಮತ್ತು ಓಲೈಕೆ ರಾಜಕಾರಣದಿಂದಾಗಿ ದೇಶಕ್ಕೆ ಹಾನಿಯಾಗುತ್ತಿದೆ ಎಂದು ಜಾವೇಡಕರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿರುವುದಾಗಿ ಉರ್ದು ದಿನಪತ್ರಿಕೆ ಮಾಡಿರುವ ವರದಿ ಬಗ್ಗೆ ರಾಹುಲ್ ಗಾಂಧಿ ಮೌನ ಮುರಿಯಬೇಕು ಎಂದು ಜಾವೇಡಕರ್ ಒತ್ತಾಯಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com