ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ ಕುಮಾರಸ್ವಾಮಿ ಕಣ್ಣೀರಿಟ್ಟಿದ್ದು ನಮಗೆಲಾ ಗೊತ್ತೇ ಇದೆ. ಕುಮಾರಸ್ವಾಮಿ ಅವರು ಕಣ್ಣೀರಿಟ್ಟಿದ್ದು, ನಮಗೆ ಹಳೆಯ ಹಿಂದಿ ಸಿನಿಮಾಗಳ ದಿನಗಳನ್ನು ನೆನಪಿಸುತ್ತವೆ ಎಂದು ಜೇಟ್ಲಿ ಹೇಳಿದ್ದಾರೆ. ಅವಕಾಶವಾದಿತನದ ಮೈತ್ರಿ ಎಂದಿಗೂ ವಿರೋಧಾಭಾಸದಿಂದಲೇ ಕೂಡಿರುತ್ತದೆ ಎಂದಿರುವ ಜೇಟ್ಲಿ ಈ ಹಿಂದೆಯೂ ಕಾಂಗ್ರೆಸ್ ಪಕ್ಷ ದೇವೇಗೌಡ, ಐಕೆ ಗುಜ್ರಾಲ್, ಚರಣ್ ಸಿಂಗ್, ಚಂದ್ರಶೇಖರ್ ಅವರ ಸರ್ಕಾರಕ್ಕೆ ಬೆಂಬಲ ನೀಡಿತ್ತು, ಆದರೆ ಅವರಿಗೂ ಕಿರುಕುಳ ನೀಡಿತ್ತು, ದೇವೇಗೌಡರಿಗೆ ಮಾಡಿದ್ದನ್ನೇ ಕಾಂಗ್ರೆಸ್ ಕುಮಾರಸ್ವಾಮಿಗೂ ಮಾಡುತ್ತಿದೆ ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.