ಮಂಗಳವಾರ ಮಾಧ್ಯಮಗಳೊಡನೆ ಮಾತನಾಡಿದ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್, ಟಿಟಿಡಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಭಕ್ತರ ಅಭಿಪ್ರಾಯಗಳನ್ನು ಪರಿಗಣಿಸಲಿದೆ ಎಂದರು.ಧಾರ್ಮಿಕ ವಿಧಿಗಳ ಆಚರಣೆ ವೇಳೆ ದೇವಾಲಯ ಮುಚ್ಚುವದರಿಂದ ಭಕ್ತಾದಿಗಳಿಗೆ ಅನಾನುಕೂಲವಾಗಲಿದೆ. ಹೀಗಾಗಿ ಇದನ್ನು ತಪ್ಪಿಸಲು ಸೀಮಿತ ಸಂಖ್ಯೆಯ ಭಕ್ತರಿಗೆ ಶ್ರೀವಾರಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.ಆದರೆ, ಜುಲೈ 24 ರಂದು ಈ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಅಲ್ಲಿಯವರೆಗೆ ಭಕ್ತರು, ಮತ್ತು ತಜ್ಞರ ಅಭಿಪ್ರಾಯಗಳನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.