ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಹಿಮಾಚಲ ಪ್ರದೇಶದ ಹಮಿರ್ ಪುರ ಬಿಜೆಪಿ ಸಂಸದ ಅನುರಾಗ್ ಥಾಕೂರ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರನ್ನಾಗಿ ಮಂಗಳವಾರ ನೇಮಕ ಮಾಡಿದೆ.
ಲೋಕಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿದ್ದ ರಾಕೇಶ್ ಸಿಂಗ್ ಅವರನ್ನು ಮಧ್ಯ ಪ್ರದೇಶ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಅನುರಾಗ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿರುವ ಅನುರಾಗ್ ಥಾಕೂರ್ ಅವರು ಕೇಳಮನೆಯಲ್ಲಿ ಆಡಳಿತ ಪಕ್ಷದ ಪ್ರಮುಖ ಧ್ವನಿಯಾಗಿದ್ದಾರೆ.