ತಿದ್ದುಪಡಿ ಕಾಯ್ದೆಯ ಮೂಲಕ ಹೊರ ದೇಶದಲ್ಲಿರುವ ಭಾರತೀಯರ ಮೇಲೆ ಭಯೋತ್ಪಾದಕ ದಾಳಿ ನಡೆದರೆ ಅದನ್ನೂ ತನಿಖೆ ನಡೆಸುವ ಅಧಿಕಾರ ಎನ್ಐಎ ಗೆ ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಮಾನವ ಕಳ್ಳಸಾಗಣೆಯನ್ನು ತಡೆಗಟ್ಟಲು ನೋಡಲ್ ಪ್ರಾಧಿಕಾರವನ್ನಾಗಿಯೂ ಎನ್ಐಎಯನ್ನು ಬಳಕೆ ಮಾಡಿಕೊಳ್ಳಲು ಈ ತಿದ್ದುಪಡಿ ಕಾಯ್ದೆಯ ಮೂಲಕ ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.