ಪ್ರವೀಣ್ ತೊಗಾಡಿಯಾಗೆ ಗುವಾಹತಿ ಪ್ರವೇಶಿಸದಂತೆ ನಿಷೇಧ

ಮುಂದಿನ ಎರಡು ತಿಂಗಳ ಕಾಲ ರಾಜಧಾನಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಮಾಜಿ...
ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ
ಗುವಾಹತಿ: ಮುಂದಿನ ಎರಡು ತಿಂಗಳ ಕಾಲ ರಾಜಧಾನಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಮಾಜಿ ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರಿಗೆ ಗುವಾಹತಿ ಪೊಲೀಸರು ನಿಷೇಧ ಹೇರಿದ್ದಾರೆ.
ಪ್ರವೀಣ್ ತೊಗಾಡಿಯಾ ಅವರು ಇಂದು ಮತ್ತು ಜುಲೈ 19ರಂದು ಗುವಾಹತಿಯಲ್ಲಿ ಅಂತರಾಷ್ಟ್ರೀಯ ಹಿಂದೂ ಪರಿಷತ್ ಸರಣಿ ಸಭೆಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರಿಗೆ ನಿಷೇಧ ಹೇರಲಾಗಿದೆ ಮತ್ತು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗುವಾಹತಿ ಪೊಲೀಸ್ ಆಯುಕ್ತ ಹಿರೆನ್ ಚಂದ್ರ ನಾಥ್ ಅವರು ತಿಳಿಸಿದ್ದಾರೆ.
ಹಿಂದೂತ್ವ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೂಕ್ಷ್ಮ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಇದೆ. ಪ್ರಚೋದನಕಾರಿ ಹೇಳಿಕೆಯಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಮತ್ತು ಶಾಂತಿ ಕದಡುವ ಸಾಧ್ಯತೆ ಇತ್ತು. ಹೀಗಾಗಿ ಅವರಿಗೆ ನಿಷೇಧ ಹೇರಲಾಗಿದೆ ಎಂದು ನಾತ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com