ಪ್ರವೀಣ್ ತೊಗಾಡಿಯಾ ಅವರು ಇಂದು ಮತ್ತು ಜುಲೈ 19ರಂದು ಗುವಾಹತಿಯಲ್ಲಿ ಅಂತರಾಷ್ಟ್ರೀಯ ಹಿಂದೂ ಪರಿಷತ್ ಸರಣಿ ಸಭೆಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರಿಗೆ ನಿಷೇಧ ಹೇರಲಾಗಿದೆ ಮತ್ತು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗುವಾಹತಿ ಪೊಲೀಸ್ ಆಯುಕ್ತ ಹಿರೆನ್ ಚಂದ್ರ ನಾಥ್ ಅವರು ತಿಳಿಸಿದ್ದಾರೆ.