ಮುಂಬೈ: ಹಾಲು ಖರೀದಿ ದರ ಏರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಬೆಂಬಲ ನೀಡಿದ್ದು, ಬುಲೆಟ್ ರೈಲು ಯೋಜನೆಗಾಗಿ ಸಾವಿರಾರು ಕೋಟಿ ರುಪಾಯಿ ವೆಚ್ಚ ಮಾಡುತ್ತಿರುವ ಕೇಂದ್ರ ಸರ್ಕಾರ, ರೈತರಿಂದ ಹಾಲು ಖರೀದಿ ದರ ಏಕೆ ಹೆಚ್ಚಳ ಮಾಡುತ್ತಿಲ್ಲ ಎಂದು ಪ್ರಶ್ನಿಸಿದೆ.