ಜಾರ್ಖಂಡ್ : ಸ್ವಾಮಿ ಅಗ್ನಿವೇಶ್ ಮೇಲೆ ಎಬಿವಿಪಿ, ಬಿಜೆಪಿ ಯುವಮೋರ್ಚಾದಿಂದ ದಾಳಿ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಮೇಲೆ ದಾಳಿ ನಡೆದಿದೆ. ಸ್ವಾಮಿ ಅಗ್ನಿವೇಶ್ ಅವರ ಹಿಂದೂ ವಿರೋಧಿ ಧೋರಣೆಯಿಂದಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಸ್ವಾಮಿ ಅಗ್ನಿವೇಶ್
ಸ್ವಾಮಿ ಅಗ್ನಿವೇಶ್
Updated on

ಪಾಕುರ್ : ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಮೇಲೆ ದಾಳಿ ನಡೆದಿದೆ. ಸ್ವಾಮಿ ಅಗ್ನಿವೇಶ್ ಅವರ ಹಿಂದೂ ವಿರೋಧಿ ಧೋರಣೆಯಿಂದಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆಯ ಕಾರ್ಯಕರ್ತರು  ದಾಳಿ ನಡೆಸಿದ್ದಾರೆ.

ಪಾಕುರ್ ಜಿಲ್ಲೆಯ ಲಿಟ್ಟಿಪಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವೇದಿಕೆಯಿಂದ ಹೊರಬರುವಾಗ  ಹಠಾತ್ತನೆ ಬಿಜೆಪಿ ಯುವಮೋರ್ಚಾ ಮತ್ತು ಎಬಿವಿಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಸಾಮಾಜಿಕ ಹೋರಾಟಗಾರರ ಮೇಲಿನ ದಾಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅವರ ಬೆಂಬಲಿಗರು ಸಾಮಾಜಿಕ ಜಾಲತಾಣ ಹಾಗೂ ಟಿವಿ ಚಾನೆಲ್ ಗಳಲ್ಲಿ  ಹಾಕುತ್ತಿದ್ದಾರೆ.
ಈ ಮಧ್ಯೆ ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ ನಡೆಸಿರುವವರು ತಮ್ಮ ಪಕ್ಷದ ಕಾರ್ಯಕರ್ತರು ಅಲ್ಲ , ಇಂತಹ ಘಟನೆಯನ್ನು ಖಂಡಿಸುವುದಾಗಿ ಜಾರ್ಖಂಡ್ ಬಿಜೆಪಿ ವಕ್ತಾರ ಷಾದೇವೊ ತಿಳಿಸಿದ್ದಾರೆ.
ಅಗ್ನಿವೇಶ್ ಅವರ ಕಾರ್ಯಕ್ರಮದ ಬಗ್ಗೆ ನಮ್ಮಗೆ ಪೂರ್ವಭಾವಿಯಾಗಿ ಯಾವುದೇ ಮಾಹಿತಿ ಇರಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಪ್ರಸಾದ್ ಬುರ್ನಾವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com