ತಿರುವನಂತಪುರ: ಭಾರತೀಯ ಜನತಾ ಪಾರ್ಟಿಯನ್ನು ಸಂಕುಚಿತ ಮನೋಭಾವದ ಪಕ್ಷ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಶಶಿ ತರೂರ್ ಟೀಕಿಸಿದ್ದಾರೆ.
ಧರ್ಮದ ಹೆಸರಿನಲ್ಲಿ ಬಿಜೆಪಿ ಜನರನ್ನು ವಿಭಜಿಸಲು ನೋಡುತ್ತಿದೆ. ಬಿಜೆಪಿಯು ಚುನಾವಣೆ ದಿನ ಹತ್ತಿರ ಬರುವಾಗ ಜನರ ಮತಗಳನ್ನು ಧಾರ್ಮಿಕ ಧ್ರುವೀಕರಣ ಮಾಡುತ್ತದೆ ಎಂಬ ಗ್ರಹಿಕೆಯಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶದಲ್ಲಿರುವ ಸಮಸ್ಯೆಗಳನ್ನು ಕಾರ್ಯತಂತ್ರದ ಮೂಲಕ ಬಗೆಹರಿಸಲು ಯತ್ನಿಸುತ್ತಿದೆ. ಧಾರ್ಮಿಕ ವಿಚಾರಗಳಿಂದ ಕಾಂಗ್ರೆಸ್ ಯಾವತ್ತಿಗೂ ದೂರವಿರಲು ಪ್ರಯತ್ನಿಸುತ್ತದೆ. ಆದರೆ ಬಿಜೆಪಿ ಧರ್ಮದ ವಿಚಾರವಿಟ್ಟುಕೊಂಡೇ ರಾಜಕೀಯ ಮಾಡುತ್ತಿದೆ ಎಂದು ಆಪಾದಿಸಿದರು,
ಹಣದುಬ್ಬರ ನಿಯಂತ್ರಣ, ಕೃಷಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ .ದೇಶದಲ್ಲಿ ಆರ್ಥಿಕ ಪ್ರಗತಿ ಕುಂಠಿತಗೊಂಡಿದೆ, ಇಂಧನ ಬೆಲೆ ಏರಿಕೆ, ಆಹಾರ ಉತ್ಪನ್ನಗಳ ಬೆಲೆ ಏರಿಕೆ ಮತ್ತು ರಫ್ತು ಮತ್ತು ಉತ್ಪಾದನೆಯಲ್ಲಿ ಕುಸಿತಗೊಂಡಿರುವುದರಿಂದ ದೇಶದ ಜನತೆ ಬಿಜೆಪಿಯನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವುದಿಲ್ಲ ಎಂದು ಹೇಳಿದರು.
Advertisement