2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಮತ್ತು ಸಂವಿಧಾನವನ್ನು ಬದಲಿಸುವ ಮೂಲಕ ಅಲ್ಪ ಸಂಖ್ಯಾತರನ್ನು ಕಡೆಗಣಿಸುತ್ತಾರೆ ಎಂದು ಶಶಿ ತರೂರ್ ಆರೋಪಿಸಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ತಿರುವನಂತಪುರದಲ್ಲಿರುವ ತರೂರ್ ಅವರ ಕಚೇರಿ ಮೇಲೆ ದಾಳಿ ನಡೆಸಿ, ಕಪ್ಪು ಬಾವುಟ ಪ್ರದರ್ಶಿಸಿದ್ದರು.