ದೆಹಲಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಬಾಲಕನನ್ನು ಹೊಡೆದು ಸಾಯಿಸಿದ ವಿದ್ಯಾರ್ಥಿಗಳ ಗುಂಪು

ವಿದ್ಯಾರ್ಥಿಗಳ ಗುಂಪೊಂದು 10ನೇ ತರಗತಿಯ ಬಾಲಕನನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ದೆಹಲಿಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ವಿದ್ಯಾರ್ಥಿಗಳ ಗುಂಪೊಂದು 10ನೇ ತರಗತಿಯ ಬಾಲಕನನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ದೆಹಲಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ ಎಂದು ಗುರುವಾರ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ ನಿನ್ನೆ ಜ್ಯೋತಿ ನಗರದ ಎಸ್ ಕೆವಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 17 ವರ್ಷದ ಗೌರವ್ ಎಂಬ ವಿದ್ಯಾರ್ಥಿಯ ಮೇಲೆ ಇತರೆ ವಿದ್ಯಾರ್ಥಿಗಳು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗೌರವ್ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದನ್ನು ಗಮನಿಸಿದ್ದಾರೆ. ನಂತರ ಗೌರವ್ ಸಹೋದರ ಗೋವಿಂದ್ ನೆರವಿನೊಂದಿಗೆ ಜಿಟಿಬಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯಯೇ ಗೌರವ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಗೌರವ ಬಾಬರ್ ಪುರದಲ್ಲಿ ತನ್ನ ಪೋಷಕರ ಜೊತೆ ವಾಸಿಸುತ್ತಿದ್ದು, ಬುಧವಾರ ತನ್ನ ಶಿಕ್ಷಕರನ್ನು ಭೇಟಿ ಮಾಡಲು ಹೋದ ವೇಳೆ ಗೌರವ್ ಮತ್ತು ಇತರೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಕೆಲ ವಿದ್ಯಾರ್ಥಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com