ಸಂಸತ್ತು ಮುಂಗಾರು ಅಧಿವೇಶನ ಜು.18ರಿಂದ ಆರಂಭವಾಗಿದ್ದು, ಆಗಸ್ಟ್ 10ವರೆಗೂ ನಡೆಯಲಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಟಿಡಿಪಿ ಪಕ್ಷಗಳು ನಿನ್ನೆಯಷ್ಟೇ ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದರು. ಅಲ್ಲದೆ, ಅವಿಶ್ವಾಸ ನಿರ್ಣಯ ಮಂಡನೆ ಕುರಿತ ಚರ್ಚೆಯನ್ನು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ನಡೆಸುವುದಾಗಿ ತಿಳಿಸಿದ್ದರು.