ಈ ವೇಳೆ ಪ್ರತಿಕ್ರಿಯೆ ನೀಡಿದ ಮಧ್ಯಪ್ರದೇಶದ ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕಣ್ಣೀರು ಹಾಕಿದ್ದನ್ನು ಇಡೀ ದೇಶವೇ ನೋಡಿದೆ. ಒಂದು ಕುಟುಂಬದ ಸರ್ಕಾರಕ್ಕೆ ಮಾತ್ರ ಕಾಂಗ್ರೆಸ್ ಬೆಂಬಲ ನೀಡಿದೆ. ಕಾಂಗ್ರೆಸ್ ಜೊತೆಗೂಡಿ ಇನ್ನೆಷ್ಟು ಪಕ್ಷಗಳು ವಿಷ ಕುಡಿಯಬೇಕು ಎಂದು ಹೇಳಿದರು.