ಇತ್ತೀಚೆಗಷ್ಟೇ ದೇಶದಲ್ಲಿ ನಡೆಯುತ್ತಿರುವ ಗೋ ಸಂರಕ್ಷಕರ ಸೋಗಿನ ದುಷ್ಕರ್ಮಿಗಳು ಮತ್ತು ಮಕ್ಕಳ ಕಳ್ಳರು ಎಂದು ಶಂಕಿಸಿ ನಡೆಸಲಾಗುತ್ತಿದ್ದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆ ಸರ್ಕಾರದ ಹೊಣೆಯಾಗಿದ್ದು, ಸಾಮೂಹಿಕ ಹಲ್ಲೆ ತಡೆಯಲು ಕಾನೂನು ರಚಿಸಿ ಎಂದು ನಿರ್ದೇಶನ ನೀಡಿತ್ತು.