ಅವಿಶ್ವಾಸ ನಿರ್ಣಯದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ, ಜಿಎಸ್ ಟಿ, ಜಯ್ ಷಾ ಆಸ್ತಿ ಸೇರಿದಂತೆ ಸಾಕಷ್ಟು ವಿಚಾರಗಳ ಕುರಿತು ಮಾತನಾಡಿದ್ದರು. ಈ ಎಲ್ಲ ಅಂಶಗಳನ್ನೂ ತಳ್ಳಿ ಹಾಕಿರುವ ಬಿಜೆಪಿ ರಾಹುಲ್ ಗಾಂಧಿ ದೇಶಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದೆ. ಅಲ್ಲದೆ ಸುಳ್ಳು ಆರೋಪಗಳ ಮೂಲಕ ಸರ್ಕಾರದ ಘನತೆಗೆ ಧಕ್ಕೆ ತರಲು ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.