ಕೋಲ್ಕತಾ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಎಲ್ಲಾ 42 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಹೇಳಿದ್ದಾರೆ.
ಟಿಎಂಸಿ ಹುತಾತ್ಮರ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ, ತಮ್ಮ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುವ ಮೂಲಕ ದೇಶ ರಕ್ಷಿಸಲಿದೆ ಎಂದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಖ್ಯಾಬಲ ತೀವ್ರವಾಗಿ ಕುಸಿಯಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜ್ಯದಲ್ಲಿ ನಾವು ಎಲ್ಲಾ 42 ಸ್ಥಾನ ಗೆಲ್ಲುತ್ತೇವೆ. ಇದು ನಮ್ಮ ಪ್ರತಿಜ್ಞೆ. ದೇಶ ಉಳಿಸಲು ನಾವು ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುತ್ತೇವೆ. ಈ ಸಂಬಂಧ ಜನವರಿಯಲ್ಲಿ ದೊಡ್ಡ ರ್ಯಾಲಿ ಆಯೋಜಿಸಿ, ಎಲ್ಲಾ ಪ್ರತಿಪಕ್ಷ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.