ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ

ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ
ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ
ನವದೆಹಲಿ: ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಎದುರು ಮಾತನಾಡಿದ ಸೊನಿಯಾ ಗಾಂಧಿ ನರೇಂದ್ರ ಮೋದಿ  ಸರ್ಕಾರದ ವಿರುದ್ಧ ವಾಕ್ಪ್ರಹಾರ ನಡೆಸಿದರು. 
"ದೇಶದ ಬಡಜನತೆ ಭಯ ಹಾಗೂ ಹತಾಶೆಯ ಜೀವನ  ನಡೆಸುವ ವಾತಾವರಣ ನಿರ್ಮಾಣವಾಗಿದೆ.ಈ ಕುರಿತಂತೆ ನಾವುಗಳು ಎಚ್ಚರ ವಹಿಸಬೇಕಿದೆ" ಅವರು ಹೇಳಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರ ವಾಕ್ಚಾತುರ್ಯವು ಕೇಂದ್ರ ಸರ್ಕಾರದ ಪತನ  ಪ್ರಾರಂಭವಾಗಿರುವುದನ್ನು ಸೂಚಿಸಿದೆ. ಅಲ್ಲದೆ ಅದು ತನ್ನ ಹತಾಶ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ನಾವು ಒಗ್ಗಟ್ಟಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ.ಪ್ರಜಾಪ್ರಭುತ್ವವನ್ನು ರಕ್ಷಿಸುವ ಕೆಲಸಕ್ಕೆ ನಾವು ರಾಹುಲ್ ಅವರೊಂದಿಗೆ ಕೈಜೋಡಿಸುತ್ತೇವೆ" ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com