"ಕಟ್ಟಡದ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿರುವುದರ ಬಗ್ಗೆ ಬಿಲ್ಡರ್ ಗೆ ತಿಳಿಸಿದ್ದೆವು, ಆದರೆ ಸಿಮೆಂಟ್ ಹಾಕಿ ಬಿರುಕನ್ನು ಮುಚ್ಚವಂತೆ ಬಿಲ್ಡರ್ ಸೂಚನೆ ನೀಡಿದ್ದರು. ಅಷ್ಟೇ ಅಲ್ಲದೇ ಎಂದಿನಂತೆ ಕಾಮಗಾರಿ ಮುಂದುವರೆಸುವಂತೆಯೂ ಹೇಳಿದ್ದರು". ನಾವು ಮೊದಲನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗ್ರೌಂಡ್ ಫ್ಲೋರ್ ನಲ್ಲಿ ಕುಸಿತ ಉಂಟಾಗಿರಬೇಕು ಎಂದು ಎಂದು ಕಾರ್ಮಿಕರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಾಝಿಯಾಬಾದ್ ನ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಮೇಲ್ನೋಟಕ್ಕೆ ಕಟ್ಟಡದ ಗುಣಮಟ್ಟದಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳದಿಂದ 7 ಜನರನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.