ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಬಂಧನಕ್ಕೆ ತಡೆ, ಬಂಧನ ಭೀತಿಯಿಂದ ಚಿದಂಬರಂ ಪಾರು

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ...
ಪಿ ಚಿದಂಬರಂ
ಪಿ ಚಿದಂಬರಂ
ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. 
ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಆಗಸ್ಟ್ 7ರವರೆಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. 
ಏರ್ ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿತ್ತು. 
ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ದೆಹಲಿ ಹೈಕೋರ್ಟ್ ಆಗಸ್ಟ್ 7ರವರೆಗೂ ವಿಸ್ತರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com