ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಬಂಧನಕ್ಕೆ ತಡೆ, ಬಂಧನ ಭೀತಿಯಿಂದ ಚಿದಂಬರಂ ಪಾರು

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ...
ಪಿ ಚಿದಂಬರಂ
ಪಿ ಚಿದಂಬರಂ
Updated on
ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. 
ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಆಗಸ್ಟ್ 7ರವರೆಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. 
ಏರ್ ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿತ್ತು. 
ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ದೆಹಲಿ ಹೈಕೋರ್ಟ್ ಆಗಸ್ಟ್ 7ರವರೆಗೂ ವಿಸ್ತರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com