ಇಂದು ಸಂಸತ್ ಅಧಿವೇಶನಕ್ಕೆ ತೆರಳುವ ಮುನ್ನ ಸಂಸತ್ ಭವನದ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಗೋ ಸಂರಕ್ಷಣೆ ಹೆಸರಲ್ಲಿ ರಾಜಸ್ಥಾನದಲ್ಲಿ ನಡೆದ ಸಾಮೂಹಿಕ ಹಲ್ಲೆ ಮತ್ತು ಸಾವು ಪ್ರಕರಣ ನಿಜಕ್ಕೂ ಖಂಡನಾರ್ಹ. ವಿಪರ್ಯಾಸವೆಂದರೆ ಇಂತಹ ಕೃತ್ಯಗಳಿಗೆ ಕೇಂದ್ರ ಸರ್ಕಾರವೇ ಬೆಂಬಲ ನೀಡುತ್ತಿದೆ. ಹೀಗಾಗಿ ದೇಶದಲ್ಲಿ ಇಂತಹ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು.