ಇದು ಮೋದಿಯವರ 'ಕ್ರೂರ ನವ ಭಾರತ', ಅಮಾಯಕರು ಸಾಯುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜಸ್ಥಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಮತ್ತು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸಾಮೂಹಿಕ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಪೊಲೀಸರು 3 ಗಂಟೆ ತೆಗೆದುಕೊಂಡಿದ್ದಾಕೆ. ಕೇವಲ 6 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಸೇರಿಸಲು ಅಷ್ಟು ಹೊತ್ತು ಬೇಕೇ? ವಾಹನದಲ್ಲಿದ್ದ ವ್ಯಕ್ತಿ ನೋವಿನಿಂದ ನರಳುತ್ತಿದ್ದರೆ ಮಾರ್ಗಮಧ್ಯೆ ಪೊಲೀಸರು ಟೀ ವಿರಾಮ ತೆಗೆದುಕೊಂಡಿದ್ದಾರೆ. ಈ ಮೋದಿಯ ಕ್ರೂರ ನವ ಭಾರತದಲ್ಲಿ ಮಾನವೀಯತೆಯ ಜಾಗದಲ್ಲಿ ದ್ವೇಷ ಸ್ಥಾನ ಪಡೆದಿದೆ. ಅಮಾಯಕರು ಈ ದ್ವೇಷಕ್ಕೆ ಬಲಿಯಾಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇನ್ನು ಕೆಲ ಮಾಧ್ಯಮಗಳು ರಾಜಸ್ತಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಮತ್ತು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ವರದಿಗಳನ್ನು ಬಿತ್ತರಿಸಿದ್ದವು. ವರದಿಯನ್ವಯ ಗೋಸಂರಕ್ಷಕರ ಸೋಗಿನಲ್ಲಿ ದಾಳಿ ಮಾಡಿದ್ದವಂರಿಂದ ಗಂಭೀರವಾಗಿ ಗಾಯಗೊಂಡಿದ್ದ ರಕ್ಬರ್ ಖಾನ್ ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸುವಲ್ಲಿ ವಿಳಂಬ ಮಾಡಿದ್ದರಿಂದಲೇ ಆತ ಸಾವನ್ನಪ್ಪಿದ್ದ ಎಂದು ಹೇಳಿದ್ದವು.
ಘಟನಾ ಪ್ರದೇಶದಿಂದ ಆಸ್ಪತ್ರೆಗೆ ಕೇವಲ 6 ಕಿ.ಮೀ ಅಂತರವಿದ್ದು. ವಾಹನದಲ್ಲಿ ತೆರಳಿದರೆ ಕೇವಲ 15 ನಿಮಿದಲ್ಲಿ ಆಸ್ಪತ್ರೆ ಸೇರಬಹುದು. ಆದರೆ ಪೊಲೀಸರು 3 ಗಂಟೆ ತೆಗೆದುಕೊಂಡರು. ಸಾವುನೋವಿನ ನಡುವೆ ಸಂತ್ರಸ್ಥ ನರಳುತ್ತಿದ್ದರೂ ಪೊಲೀಸರು ಮಾರ್ಗ ಮಧ್ಯೆ ಚಹಾ ಸೇವಿಸಲು ವಾಹನ ನಿಲುಗಡೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com