ಈ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಯಾವುದೇ ಅಪರಾಧ ನಡೆದ ಪ್ರತಿ ಬಾರಿ ಖುಷಿಯಿಂದ ನೆಗೆದಾಡುವುದನ್ನು ನಿಲ್ಲಿಸಿ. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. ನೀವು ಸಮಾಜವನ್ನು ಎಲ್ಲಾ ರೀತಿಯಲ್ಲಿಯೂ ವಿಭಜಿಸುತ್ತಿದ್ದೀರಿ. ಅದು ಕೂಡ ಚುನಾವಣೆಯ ಲಾಭಕ್ಕಾಗಿ. ಆ ಮೇಲೆ ಮೊಸಳೆ ಕಣ್ಣೀರು ಹಾಕುತ್ತೀರಿ. ಈವರೆಗೂ ಆಗಿದ್ದು ಸಾಕು, ನೀವೊಬ್ಬ ದ್ವೇಷದ ವ್ಯಾಪಾರಿ ಎಂದು ಟಾಂಗ್ ನೀಡಿದ್ದಾರೆ.