ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು, ಎಲ್ಲಾ ರಾಜ್ಯಗಳಿಗೂ ಭಾರತ ಸರ್ಕಾರ ಕಠಿಣ ಸಂದೇಶವನ್ನು ರವಾನಿಸಿದೆ. ಸಾಮೂಹಿಕ ಹಲ್ಲೆ, ಹತ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣಗಳ ಸಂಬಂಧ ಯಾವುದೇ ರೀತಿಯ ನಡವಳಿಕೆಗಳನ್ನು ಸಹಿಸದೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.