ಶುಕ್ರವಾರ ರಕ್ಬರ್ ಖಾನ್ ಹಾಗೂ ಆತನ ಸ್ನೇಹಿತ ಅಸ್ಲಾಂ ಹರಿಯಾಣದಲ್ಲಿರುವ ತಮ್ಮ ಗ್ರಾಮಕ್ಕೆ ಎರಡು ದನಗಳನ್ನು ಕೊಂಡೊಯ್ಯುತ್ತಿದ್ದರು. ರಾಮಘರ್ ನಲ್ಲಿರುವ ಅರಣ್ಯ ಪ್ರದೇಶದ ಮಾರ್ಗವಾಗಿ ತೆರಳುವಾಗ ಗೋರಕ್ಷಕರು ಅವರ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಸ್ಲಾಂ ತಪ್ಪಿಸಿಕೊಂಡು ಪರಾರಿಯಾಗಿದ್ದ, ಆದರೆ, ರಕ್ಬರ್ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ದನಗಳನ್ನು ಗೋಶಾಲೆಗೆ ಬಿಟ್ಟಿದ್ದರು. ಬಳಿಕ ಮೂರು ಗಂಟೆ ತಡವಾಗಿ ಗಾಯಾಳು ರಕ್ಬರ್ ಖಾನ್ ನನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ದಾರಿ ಮಧ್ಯೆಯೇ ರಕ್ಬರ್ ಖಾನ್ ಮೃತಪಟ್ಟಿದ್ದಾರೆ.