ಭಾರತೀಯ ಯೋಧರ ಮೇಲೆ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಿಆರ್ಪಿಎಫ್ ತುಕಡಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ...
ಭಾರತೀಯ ಸೇನೆ
ಭಾರತೀಯ ಸೇನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಿಆರ್ಪಿಎಫ್ ತುಕಡಿ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. 
ಬಾಟಾಮಾಲೋ ಪ್ರದೇಶದಲ್ಲಿನ ಸಿಆರ್ಪಿಎಫ್ ತುಕಡಿ ಮೇಲೆ ಉಗ್ರರು ಏಕಾಏಕಿಯಾಗಿ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದು ಇಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಮೃತ ಯೋಧನನ್ನು 23 ವರ್ಷದ ಶಂಕರ್ ಲಾಲ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳವನ್ನು ಯೋಧರು ಸುತ್ತುವರೆದಿದ್ದು ಅಡಗಿ ಕುಳಿತಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com