ಪ್ರಕರಣ ಸಂಬಂಧ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿದ್ದು, ಇತರೆ ಪೊಲೀಸ್ ಪೇದೆಗಳನ್ನು ಅಲ್ಲಿನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಕೆಲ ಮಾಧ್ಯಮಗಳು ಹಾಗೂ ಕೆಲ ಪತ್ರಿಕೆಗಳು ಸಾಮೂಹಿಕ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ಥನನ್ನು ಆಸ್ಪತ್ರೆಗೆ ಸೇರಿಸುವಾಗ ಪೊಲೀಸರು ಕರ್ತ್ಯವ್ಯಲೋಪ ಎಸಗಿದ್ದರು. ಮಾರ್ಗಮಧ್ಯೆ ಚಹಾ ಕುಡಿಯಲು ವಾಹನ ನಿಲ್ಲಿಸಿ ಸಂತ್ರಸ್ಥನ ಸಾವಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದವು.