ಸಾಮೂಹಿಕ ಹಲ್ಲೆ ತಡೆಗೆ ಎಸ್ ಪಿ ಮಟ್ಟದ ಕಾರ್ಯಪಡೆ ರಚಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ

ಸಾಮೂಹಿಕ ಹಲ್ಲೆಗಳನ್ನು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಎಸ್ ಪಿ ಮಟ್ಟದ ವಿಶೇಷ ಕಾರ್ಯಪಡೆಯನ್ನು ರಚಿಸುವುದಕ್ಕೆ ಕೇಂದ್ರ ಸರ್ಕಾರ ರಾಜ್ಯ ಎಲ್ಲಾ ಸರ್ಕಾರಗಳಿಗೆ ಸೂಚನೆ ನೀಡಿದೆ.
ಸಾಮೂಹಿಕ ಹಲ್ಲೆ ತಡೆಗೆ ಎಸ್ ಪಿ ಮಟ್ಟದ ಕಾರ್ಯಪಡೆ ರಚಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ
ಸಾಮೂಹಿಕ ಹಲ್ಲೆ ತಡೆಗೆ ಎಸ್ ಪಿ ಮಟ್ಟದ ಕಾರ್ಯಪಡೆ ರಚಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ
ನವದೆಹಲಿ: ಸಾಮೂಹಿಕ ಹಲ್ಲೆಗಳನ್ನು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಎಸ್ ಪಿ ಮಟ್ಟದ ವಿಶೇಷ ಕಾರ್ಯಪಡೆಯನ್ನು ರಚಿಸುವುದಕ್ಕೆ ಕೇಂದ್ರ ಸರ್ಕಾರ ರಾಜ್ಯ ಎಲ್ಲಾ ಸರ್ಕಾರಗಳಿಗೆ ಸೂಚನೆ ನೀಡಿದೆ. 
ಸಾಮಾಜಿಕ ಜಾಲತಾಣ ನಲ್ಲಿ ಹರಿದಾಡುವ ವಿಷಯಗಳ ಮೇಲೆ ಕಣ್ಗಾವಲಿಡುವುದು ಹಾಗೂ ಗೌಪ್ಯ ಮಾಹಿತಿಯನ್ನು ಸಂಗ್ರಹಿಸುವ ಕೆಲಸವನ್ನು ವಿಶೇಶ ಕಾರ್ಯಪಡೆ ಮಆಡಲಿದೆ. 
ಒಂದು ವೇಳೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪಾಲಿಸದೇ ಇದ್ದಲ್ಲಿ ಹಾಗೂ ಸಾಮೂಹಿಕ ಹಲ್ಲೆ, ಹತ್ಯೆಗಳನ್ನು ತಡೆಗಟ್ಟಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ಘಟನೆಗಳನ್ನು ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com