'ಸಾಮಾಜಿಕ ನ್ಯಾಯಾಕ್ಕಾಗಿ ಹೋರಾಡುವುದೇ ತಪ್ಪು ಎಂದಾದರೆ ಹೌದು.. ನಾನು ತಪ್ಪಿತಸ್ಥ, ಸತ್ಯ ಮತ್ತು ಅಧಿಕಾರಶಾಹಿತ್ವದ ವಿರುದ್ಧ ಹೋರಾಡುವವನು ಬಂಡುಕೋರ ಎಂದಾದರೆ ಹೌದು.. ನಾನು ಬಂಡುಕೋರ, ಜೈಲಿಗೆ ಅಟ್ಟಿದ ಮಾತ್ರಕ್ಕೆ ಸತ್ಯ, ರೈತರ ಪರ ಮತ್ತು ಯುವಕರ ಪರ ಹೋರಾಡುವ ನನ್ನ ಧನಿಯನ್ನು ಬಿಜೆಪಿಯ 'ಹಿಟ್ಲರ್' ಸರ್ಕಾರದಿಂದ ಅಡಗಿಸಲು ಸಾಧ್ಯವಿಲ್ಲ. ಯಾವುದೇ ಸಮಸ್ಯೆಯನ್ನು ಆ ಸಮಸ್ಯೆಯ ಮಟ್ಟದಲ್ಲೇ ಯೋಚಿಸಿದರೇ ಅದನ್ನು ನಿವಾರಿಸಲು ಸಾಧ್ಯವಿಲ್ಲ. ಆ ಸಮಸ್ಯೆಯನ್ನು ಅದಕ್ಕಿಂತ ಉನ್ನತ ಮಟ್ಟದಲ್ಲಿ ನಿಂತು ಯೋಚಿಸಿದಾಗ ಮಾತ್ರ ಅದನ್ನು ನಿವಾರಿಸಬಹುದು.'