ಐಎನ್ ಎಕ್ಸ್ ಮಾಧ್ಯಮ ಹಗರಣ: ಆಗಸ್ಟ್ 1ರವರೆಗೆ ಪಿ. ಚಿದಂಬರಂ ಬಂಧಿಸದಂತೆ ರಕ್ಷಣೆ

ಐಎನ್ ಎಕ್ಸ್ ಮಾಧ್ಯಮ ಹಗರಣದಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 1 ರವರೆಗೂ ಬಂಧಿಸದಂತೆ ಮಧ್ಯಂತರ ರಕ್ಷಣೆ ಒದಗಿಸಿ ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ಪಿ. ಚಿದಂಬರಂ
ಪಿ. ಚಿದಂಬರಂ

ನವದೆಹಲಿ: ಐಎನ್ ಎಕ್ಸ್ ಮಾಧ್ಯಮ ಹಗರಣದಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್  1 ರವರೆಗೂ ಬಂಧಿಸದಂತೆ  ಮಧ್ಯಂತರ ರಕ್ಷಣೆ ಒದಗಿಸಿ ದೆಹಲಿ ಹೈಕೋರ್ಟ್ ಇಂದು  ತೀರ್ಪು ಪ್ರಕಟಿಸಿದೆ.

 ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕಳೆದ ವರ್ಷ ಜೂನ್ ತಿಂಗಳಲ್ಲಿ ಹೊರಡಿಸಿದ್ದ ಲೂಕ್ ಔಟ್  ಆದೇಶವನ್ನು  ಮದ್ರಾಸ್ ಹೈಕೋರ್ಟ್ ಸೋಮವಾರ  ತೆಗೆದುಹಾಕಿತ್ತು.

 ಆದಾಗ್ಯೂ, ಈ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ವಿರುದ್ಧ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಈ ಆದೇಶ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com