ಕರುಣಾನಿಧಿ ಆರೋಗ್ಯದ ಬಗ್ಗೆ ಸುಳ್ಳು ವದಂತಿಗಳನ್ನು ನಂಬಬೇಡಿ- ಸ್ಟಾಲಿನ್

ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಜ್ವರದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಅವರ ಆರೋಗ್ಯದಲ್ಲಿ ಆತಂಕ ಪಡಬೇಕಾಗಿಲ್ಲ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಕರುಣಾನಿಧಿ
ಕರುಣಾನಿಧಿ
Updated on

ಚೆನ್ನೈ: ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಜ್ವರದ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಅವರ ಆರೋಗ್ಯದಲ್ಲಿ ಆತಂಕ ಪಡಬೇಕಾಗಿಲ್ಲ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ.

ಕರುಣಾನಿಧಿ ಆರೋಗ್ಯದ ಕ್ಷೀಣ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಸುದ್ದಿ ಕುರಿತು ಪ್ರತಿಕ್ರಿಯಿಸಿದ ಸ್ಟಾಲಿನ್, ಕರುಣಾನಿಧಿ ಅವರ ಆರೋಗ್ಯ ಕುರಿತು  ಸುಳ್ಳು ಸುದ್ದಿಗಳನ್ನು  ಹಬ್ಬಿಸಲಾಗುತ್ತಿದೆ. ಅಂತಹ ವದಂತಿಗಳಲ್ಲಿ ನಂಬಿಕೆ ಇಡಬೇಡಿ. ಅವರು ಮನೆಯಲ್ಲಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು  ಹೇಳಿದರು.

ಸ್ವಲ್ಪ ಸ್ವರದಿಂದ ಬಳಲುತ್ತಿರುವ ಕರುಣಾನಿಧಿ ಟ್ರಾಚೆಸ್ಟೋಮಿ ಟ್ಯೂಬ್ ಬದಲಾಯಿಸಲು  ಖಾಸಗಿ ಆಸ್ಪತ್ರೆಗೆ ತೆರಳಿದ್ದರು.  ಎರಡು ದಿನಗಳ ನಂತರ ಕರುಣಾನಿಧಿ ಖಾಸಗಿ ಆಸ್ಪತ್ರೆಯಿಂದ ಮನೆಗೆ ವಾಪಾಸ್ ಆಗಿದ್ದಾರೆ ಎಂದು ಅವರು ತಿಳಿಸಿದರು.

 2016 ಅಕ್ಟೋಬರ್ ತಿಂಗಳಿನಲ್ಲಿ  ಕರುಣಾನಿಧಿ ಅವರಿಗೆ ಅಲರ್ಜಿ ಸಮಸ್ಯೆ ಉಂಟಾಗಿತ್ತು. ತದನಂತರ ಆಗಾಗ್ಗೇ ಅನಾರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ಆಸ್ಪತ್ರೆಗೆ ಸೇರಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷದ ಡಿಸೆಂಬರ್ ಮೊದಲ ವಾರದಲ್ಲಿ ನ್ಯೂಟ್ರಿಷನ್ ಮತ್ತು ಹೈಡ್ರಾಷನ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ  ದಾಖಲಾಗಿದ್ದು, ಟ್ರಾಚೆಸ್ಟೋಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com