ಮರಾಠ ಸಮುದಾಯದ ಮುಖ್ಯ ಪ್ರತಿನಿಧಿಗಳನ್ನು ಕರೆದು ಮುಖ್ಯಮಂತ್ರಿಗಳು ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಮರಾಠಿಗರು ಈ ಹಿಂದೆ ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸಿ, ತಮ್ಮ ಆಗ್ರಹಗಳನ್ನು ವ್ಯಕ್ತಪಡಿಸುತ್ತಿದ್ದರು. ಎಂದಿಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗಿರಲಿಲ್ಲ. ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿ ಹಾಗೂ ಖಾಸಗಿ ಆಸ್ತಿಗಳಿಗೆ ಯಾವುದೇ ರೀತಿಯ ಹಾನಿಯುಂಟು ಮಾಡಬಾರದು ಪ್ರತಿಭಟನೆಯಿಂದ ಸಾಮಾನ್ಯ ಜನರು ಸಂಕಷ್ಟ ಎದುರಿಸುವಂತೆ ಮಾಡಬಾರದು ಎಂದು ತಿಳಿಸಿದ್ದಾರೆ.