ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ದಿನಗಳ ಹಿಂದಷ್ಟೇ ಉಗ್ರರು ನಡೆಸಿದ್ದ ದಾಳಿಯಲ್ಲಿ ಸಿಆರ್'ಪಿಎಫ್ ಯೋಧ ಶಂಕರ್ ಲಾಲ್ ಬರಾಲಾ ಅವರು ಹುತಾತ್ಮರಾಗಿದ್ದರು. ಹುತಾತ್ಮ ಯೋಧನಿಗೆ ಇಂದು ಅಂತಿಮ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ರಾಜ್ಯವರ್ಧನ್ ರಾಥೋಡ್ ಅವರು, ದೇಶವನ್ನು ಒಡೆಯಲು ಕೆಲ ಶಕ್ತಿಗಳು ಯತ್ನ ನಡೆಸುತ್ತಿವೆ ಎಂದು ಹೇಳಿದ್ದಾರೆ.