ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಫಲಿತಾಂಶದ ಕುರಿತು ಖಾಸಗಿ ಮಾಧ್ಯಮವೊಂದು ಕಪಿಲ್ ದೇವ್ ಅವರ ಪ್ರತಿಕ್ರಿಯೆ ಕೇಳಿದ್ದು, ಈ ವೇಳೆ ಹಲವು ವಿಚಾರಗಳ ಕುರಿತು ಕಪಿಲ್ ದೇವ್ ಮಾತನಾಡಿದ್ದಾರೆ. ಅಂತೆಯೇ ಚುನಾವಣೆಯಲ್ಲಿ ಜಯಭೇರಿ ಭಾರಿಸಿರುವ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷಕ್ಕೆ ಕಪಿಲ್ ದೇವ್ ಶುಭ ಕೋರಿದ್ದು, ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ದ್ವೀಪಕ್ಷಯ ಸಂಬಂಧವನ್ನು ಉತ್ತಮಗೊಳಿಸುವಂತೆ ಕಪಿಲ್ ದೇವ್ ಮನವಿ ಮಾಡಿದ್ದಾರೆ.