ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ನಮ್ಮ ವ್ಯವಸ್ಥೆ ವಿಫವಾಗಿದೆ. ಪ್ರಕರಣ ಕುರಿತು ಐಸಿಡಿಎಸ್ (ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ) ಬಳಿ ವರದಿ ಕೇಳಲಾಗಿದೆ. ನಮ್ಮ ದಾಖಲೆಗಳಲ್ಲಿ ಸಂತ್ರಸ್ತ ಕುಟುಂಬದ ಹೆಸರು ಇರುವುದರ ಕುರಿತಂತೆ ಪರಿಶೀಲನೆ ನಡೆಸುವಂತೆ ತಿಳಿಸಲಾಗಿದೆ. ಒಂದು ವೇಳೆ ಹೆಸರು ಇದ್ದಿದ್ದೇ ಆದರೆ, ಅವರಿಗೇಕೆ ಸಹಾಯ ಮಾಡಲಿಲ್ಲ ಎಂಬ ಪ್ರಶ್ನೆ ಬರುತ್ತದೆ ಎಂದು ಹೇಳಿದ್ದಾರೆ.