ಪ್ರಕಟಣೆ ನೀಡಿದ ಕಾವೇರಿ ಆಸ್ಪತ್ರೆ
ಪ್ರಕಟಣೆ ನೀಡಿದ ಕಾವೇರಿ ಆಸ್ಪತ್ರೆ

ಕರುಣಾನಿಧಿ ಅನಾರೋಗ್ಯ ಊಹಾಪೋಹಾ: ಸ್ಪಷ್ಟನೆ ನೀಡಿದ ಕಾವೇರಿ ಆಸ್ಪತ್ರೆ!

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅನಾರೋಗ್ಯದ ಕುರಿತಂತೆ ಹಬ್ಬುತ್ತಿರುವ ಊಹಪೋಹಗಳಿಗೆ ಬ್ರೇಕ್ ಪ್ರಯತ್ನವನ್ನು ಕಾವೇರಿ ಆಸ್ಪತೆ ಮಾಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ ಕರುಣಾನಿಧಿ ಅನಾರೋಗ್ಯದ ಕುರಿತಂತೆ ಹಬ್ಬುತ್ತಿರುವ ಊಹಪೋಹಗಳಿಗೆ ಬ್ರೇಕ್ ಪ್ರಯತ್ನವನ್ನು ಕಾವೇರಿ ಆಸ್ಪತೆ ಮಾಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಅವರಿಗೆ ಅವರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಡಿಎಂಕೆ ಮೂಲಗಳ ಪ್ರಕಾರ ಕಳೆದೊಂದು ವಾರದಿಂದ ಕರುಣಾನಿಧಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕರುಣಾನಿಧಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಬಗೆಯ ಊಹಾಪೋಹಗಳು ಹರಿದಾಡುತ್ತಿದ್ದು, ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ನಿವಾಸಕ್ಕೆ ಡಿಎಂಕೆ ಕಾರ್ಯಕರ್ತರು ಆತಂಕದಿಂದ ದೌಡಾಯಿಸುತ್ತಿದ್ದಾರೆ. 
ಈ ಹಿನ್ನಲೆಯಲ್ಲಿ ಗೋಪಾಲಪುರಂ ನಿವಾಸದ ಎದುರು ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸ್ಪಷ್ಟನೆ ನೀಡಿದ ಕಾವೇರಿ ಆಸ್ಪತ್ರೆ
ಇನ್ನು ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಕಾವೇರಿ ಆಸ್ಪತ್ರೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಅವರ ಆರೋಗ್ಯದಲ್ಲಿ ಕೊಂಚ ಏರಿಳಿತವಾಗಿದೆ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಕರುಣಾ ನಿಧಿ ಅವರು ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರಿಗೆ ಮನೆಯಲ್ಲಿ ಆಸ್ಪತ್ರೆ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಂತೆಯೇ ಯಾವುದೇ ಕಾರಣಕ್ಕೂ ಅವರನ್ನು ಭೇಟಿ ಮಾಡಲು ಬೆಂಬಲಿಗರಿಗೆ ಅವಕಾಶವಿಲ್ಲ ಎಂದು ಕಾವೇರಿ ಆಸ್ಪತ್ರೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. 

Related Stories

No stories found.

Advertisement

X
Kannada Prabha
www.kannadaprabha.com