ನಾನು ದೇಶವಿರೋಧಿ ನನ್ನ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸರಿಗೆ ದಿಗ್ವಿಜಯ್ ಸಿಂಗ್

ಭೋಪಾಲ್ ಪೊಲೀಸರೆದುರು ಹಾಜರಾಗಿದ್ದ ಹಿರಿಯ ಕಾಂಗ್ರೆಸ್ಸಿಗ ದಿಗ್ವಿಜಯ್ ಸಿಂಗ್, ತಮ್ಮನ್ನು ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ.
ನಾನು ದೇಶವಿರೋಧಿ ನನ್ನ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸರಿಗೆ ದಿಗ್ವಿಜಯ್ ಸಿಂಗ್
ನಾನು ದೇಶವಿರೋಧಿ ನನ್ನ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸರಿಗೆ ದಿಗ್ವಿಜಯ್ ಸಿಂಗ್
Updated on
ಭೋಪಾಲ್: ಭೋಪಾಲ್ ಪೊಲೀಸರೆದುರು ಹಾಜರಾಗಿದ್ದ ಹಿರಿಯ ಕಾಂಗ್ರೆಸ್ಸಿಗ ದಿಗ್ವಿಜಯ್ ಸಿಂಗ್, ತಮ್ಮನ್ನು ಬಂಧಿಸುವಂತೆ ಪೊಲೀಸರನ್ನು ಕೇಳಿದ್ದಾರೆ. 
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ದಿಗ್ವಿಜಯ್ ಸಿಂಗ್ ಅವರ ಕೆಲಸಗಳನ್ನು ದೇಶವಿರೋಧಿಯ ಕೆಲಸ ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ದಿಗ್ವಿಜಯ್ ಸಿಂಗ್ ಪೊಲೀಸರೆದುರು ಹಾಜರಾಗಿ ತಮ್ಮನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದಾರೆ. ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ತಮ್ಮ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದ್ದರಿಂದ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಚೌಹಾಣ್ ಹೇಳಿಕೆಯನ್ನು ವಿರೋಧಿಸಿ ಭಿತ್ತಿಪತ್ರಗಳನ್ನು ಹಿಡಿದ ನೂರಾರು ಕಾರ್ಯಕರ್ತರೊಂದಿಗೆ ಟಿಟಿ ನಗರ್ ಪೊಲೀಸ್ ಠಾಣೆಗೆ ತೆರಳಿದ್ದ ದಿಗ್ವಿಜಯ್ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ಪೊಲೀಸರು ನೀಡಿರುವ ಹೇಳಿಕೆಯನ್ನು ಓದಿದ್ದು "ಟಿಟಿ ನಗರ್ ಪೊಲೀಸ್ ಠಾಣೆಯಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಯಾವುದೇ ಪ್ರಕರಣಗಳೂ ದಾಖಲಾಗಿಲ್ಲ ಎಂದು" ತಿಳಿಸಿದ್ದಾರೆ. 
ನನ್ನನ್ನು ದೇಶವಿರೋಧಿ ಎಂದು ಸುಳ್ಳು ಆರೋಪಿಸಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೋರ್ಟ್ ಗೆ ಎಳೆಯುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com