ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ದಿಗ್ವಿಜಯ್ ಸಿಂಗ್ ಅವರ ಕೆಲಸಗಳನ್ನು ದೇಶವಿರೋಧಿಯ ಕೆಲಸ ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ದಿಗ್ವಿಜಯ್ ಸಿಂಗ್ ಪೊಲೀಸರೆದುರು ಹಾಜರಾಗಿ ತಮ್ಮನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದಾರೆ. ದಿಗ್ವಿಜಯ್ ಸಿಂಗ್ ಅವರಿಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ತಮ್ಮ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದ್ದರಿಂದ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.