ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ಎಂಜಿಎನ್ಆರ್ ಇಜಿ ) ಯೋಜನೆಯನ್ನು ಕ್ರೂರವಾಗಿ ಕಡೆಗಣಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಶುಕ್ರವಾರ ಆರೋಪಿಸಿದ್ದಾರೆ.