ಅತ್ಯಾಚಾರಕ್ಕೆ ಏರುತ್ತಿರುವ ಮುಸ್ಲಿಂ ಜನಸಂಖ್ಯೆಯೇ ಕಾರಣ: ಬಿಜೆಪಿ ಸಂಸದ

ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ ಮುಂತಾದ ಅಪರಾಧ ಪ್ರಕರಣಗಳಿಗೆ ಏರಿಕೆಯಾಗುತ್ತಿರುವ ಮುಸ್ಲಿಂ ಜನಸಂಖ್ಯೆಯೇ ಕಾರಣ ಎಂದು ಬಿಜೆಪಿ ಹಿರಿಯ ....
ಹರಿ ಓಂ ಪಾಂಡೆ
ಹರಿ ಓಂ ಪಾಂಡೆ
Updated on
ಉತ್ತರ ಪ್ರದೇಶ: ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ, ಕೊಲೆ ಮುಂತಾದ ಅಪರಾಧ ಪ್ರಕರಣಗಳಿಗೆ ಏರಿಕೆಯಾಗುತ್ತಿರುವ ಮುಸ್ಲಿಂ ಜನಸಂಖ್ಯೆಯೇ ಕಾರಣ ಎಂದು ಬಿಜೆಪಿ ಹಿರಿಯ ಸಂಸದ ಹರಿ ಓಂ ಪಾಂಡೆ ವಿವಾದಾತ್ಮಕತ ಹೇಳಿಕೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಸಂಸದರಾಗಿರುವ ಹರಿ ಓಂ ಪಾಂಡೆ, ಕೂಡಲೇ ಸರ್ಕಾರ ಏರಿಕೆಯಾಗುತ್ತಿರುವ ಮುಸ್ಲಿಂ ಜನಸಂಖ್ಯೆಯನ್ನು ನಿಯಂತ್ರಣ ಮಾಡದೇ ಹೋದರೇ ಭಾರತದಿಂದ ಮತ್ತೊಂದು ಪಾಕಿಸ್ತಾನದಂತ ದೇಶ ಸೃಷ್ಟಿಯಾಗುತ್ತದೆ ಎಂದು ಏಚ್ಚರಿಕೆ ನೀಡಿದ್ದಾರೆ.
ಭಾರತದಲ್ಲಿ ಭಯೋತ್ಪಾದನೆ, ಅತ್ಯಾಚಾರ,ಲೈಂಗಿಕ ದೌರ್ಜನ್ಯಗಳು ಹೆಚ್ಚಲು ಮುಸ್ಲಿಂ ಜನಸಂಖ್ಯೆಯೇ ಕಾರಣ, ಸ್ವಾತಂತ್ರ್ಯ ನಂತರದ ಭಾರತವನ್ನು ಸೂಕ್ಷ್ಮವಾಗಿ ಗಮನಿಸಿದಾಗ ತೀವ್ರಗತಿಯಲ್ಲಿ ಮುಸ್ಲಿಮರ ಜನಸಂಖ್ಯೆ ಏರಿಕೆಯಾಗಿರುವುದು ಕಂಡು ಬರುತ್ತದೆ ಎಂದು ಹೇಳಿದ್ದಾರೆ,
ಹೆಚ್ಚುತ್ತಿರುವ ಜನ ಸಂಖ್ಯೆಯಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಅರ್ಥಿಕ ಬೆಳವಣಿಗೆ ಕುಂಠಿತವಾಗುತ್ತಿದ್ದು, ಭಾರತದಲ್ಲಿ ಅರಾಜಕತೆ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಿಸಲು ಸರ್ಕಾರ ಸಂಸತ್ತಿನಲ್ಲಿ ಸೂಕ್ತ ಮಸೂದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com