ಡಿಎಂಕೆ ನಾಯಕ ಎಂ.ಕರುಣಾನಿಧಿ ಆರೋಗ್ಯದಲ್ಲಿ ಏರುಪೇರು: ಕಾವೇರಿ ಆಸ್ಪತ್ರೆಗೆ ದಾಖಲು

ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ(94) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಮಧ್ಯರಾತ್ರಿ ಸುಮಾರು 12:30 ರ ವೇಳೆಗೆ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಎಂ.ಕರುಣಾನಿಧಿ
ಎಂ.ಕರುಣಾನಿಧಿ
ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ(94) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ಮಧ್ಯರಾತ್ರಿ ಸುಮಾರು 12:30 ರ ವೇಳೆಗೆ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 
ಶಾಸನಾಳಕ್ಕೆ ಅಳವಡಿಸಲಾಗಿದ್ದ ಟ್ಯೂಬ್ ಬದಲಾವಣೆಯ ನಂತರ ಕರುಣಾನಿಧಿಗೆ ತೀವ್ರ ಜ್ವರ ಉಂತಾಗಿ ಜು.26 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ಈ ಬಗ್ಗೆ ಪ್ರಕಟಣೆ ನೀಡಿದ್ದು, ಕರುಣಾನಿಧಿಯವರಿಗೆ ಶಾಸನಾಳ ಸೋಂಕಿನಿಂದ ಉಂಟಾಗಿರುವ ಜ್ವರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದು, ಆರೋಗ್ಯದಲ್ಲಿ ಸ್ವಲ್ಪ ಏರು ಪೇರುಂಟಾಗಿದೆ ಎಂದು ಮಾಹಿತಿ ನೀಡಿದೆ. 
ರಾಜಕಾರಣಿಗಳು, ನಟರು ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com