ಮರಾಠ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ ಶಿವಸೇನೆ, ಬಿಜೆಪಿ ಸರ್ಕಾರ ಎಂದಿಗೂ ತನ್ನವಿರುದ್ಧದ ಹೋರಾಟವನ್ನು ಸಹಿಸಿಕೊಳ್ಳುವುದಿಲ್ಲ. ಹೇಗಾದರೂ ಸರಿ ಹೋರಾಟಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುತ್ತದೆ. ಈ ಹಿಂದೆ ಗುಜರಾತ್ ನಲ್ಲಿ ನಡೆದಿದ್ದ್ ಪಟೇಲರ ಮೀಸಲಾತಿ ಹೋರಾಟವನ್ನು ಹತ್ತಿಕ್ಕಿದ್ದಂತೆಯೇ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮರಾಠಿಗರ ಮೀಸಲಾತಿ ಹೋರಾಟವನ್ನೂ ಹತ್ತಿಕ್ಕಲು ಯತ್ನಿಸಿದೆ ಎಂದು ಶಿವಸೇನೆ ಹೇಳಿದೆ.