ಈಗಾಗಲೇ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇನ್ನು ಹರಿಯಾಣ ಹರಿಬಿಟ್ಟಿರುವ ನೀರು ನಾಳೆ ವೇಳೆಗೆ ದೆಹಲಿ ತಲುಪಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಸ್ತಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ. ಜನ ಇದಕ್ಕೆ ಸಹಕರಿಸಬೇಕು ಮತ್ತು ಯಾವುದೇ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗುವಂತೆ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.