ಚೆನ್ನೈ: ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ದುಷ್ಕರ್ಮಿಯೊರ್ವ ನಡೆಸಿದ ಪೆಟ್ರೋಲ್ ಬಾಂಬ್ ದಾಳಿಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.
ದಿನಕರನ್ ಮನೆ ಮುಂದೆ ನಿಂತಿದ್ದ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು ಕಾರು ಚಾಲಕ ಹಾಗೂ ಛಾಯಾಗ್ರಾಹಕ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಇನ್ನು ದಾಳಿಯಿಂದ ಕಾರಿನ ಗ್ಲಾಸ್ ಚೂರು ಚೂರಾಗಿದೆ.
ಇನ್ನು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಪಕ್ಷದ ಆಂತರಿಕ ದ್ವೇಷದ ಹಿನ್ನಲೆಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಸಕರ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
More #visuals from the spot: Country made petrol bomb hurled at TTV Dhinakaran's car by an unidentified miscreant in Chennai. Dhinakaran was not in the car at the time of the incident. His driver and personal photographer injured. #TamilNadupic.twitter.com/yhcy3kAKub