ಬಿಜೆಪಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ, ಇನ್ನೂ ಎಷ್ಟು ಸಮಯ ಈ ರೀತಿ ಹೊಡೆದು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕರಡು ಪ್ರತಿಯಿಂದ ಡಿಲೀಟ್ ಮಾಡಲಾಗಿರುವ 40 ಲಕ್ಷ ಜನರು ಈಗ ಎಲ್ಲಿಗೆ ಹೋಗುತ್ತಾರೆ? ಅವರಿಗಾಗಿ ಕೇಂದ್ರ ಸರ್ಕಾರ ಯಾವುದಾದರೂ ಪ್ರತ್ಯೇಕ ಪುನರ್ವಸತಿ ಯೋಜನೆಯನ್ನು ಪ್ರಾರಂಭಿಸಲಿದೆಯೇ ಇದರಿಂದ ಅಂತಿಮವಾಗಿ ತೊಂದರೆ ಎದುರಿಸುವುದು ಪಶ್ಚಿಮ ಬಂಗಾಳ. ಇದು ಬಿಜೆಪಿ ಮಾಡುತ್ತಿರುವ ಮತ ರಾಜಕಾರಣ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.