ಎನ್ಆರ್ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡಿನ ಬಗ್ಗೆ ಸಂಸತ್ ನಲ್ಲಿ ಜು.31 ರ ಕಲಾಪದಲ್ಲೂ ಚರ್ಚೆ ಮುಂದುವರೆದಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು ಎನ್ ಆರ್ ಸಿ ಕರಡನ್ನು ವಿರೋಧಿಸಿದ್ದು, ಗದ್ದಲ ಉಂಟು ಮಾಡಿದ್ದಾರೆ. ಕಾಂಗ್ರೆಸ್ ಸದಸ್ಯರ ಗದ್ದಲಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು, ಕಾಂಗ್ರೆಸ್ಸಿನ ಹಿರಿಯ ಸದಸ್ಯರು ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಿದ್ದಾರೆ. ದೇವರೇ ಪ್ರಜಾಪ್ರಭುತ್ವವನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.