ಬಿಜೆಪಿ ಎನ್ ಆರ್ ಸಿ ಮೂಲಕ ಅಲ್ಪಸಂಖ್ಯಾತರ ವಿರುದ್ಧ ಪಿತೂರಿ ನಡೆಸಿದ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಸಿಎಂ, ಅಸ್ಸಾಂ ನಲ್ಲಿ ಏನು ನಡೆಯುತ್ತಿದೆ? ಎನ್ ಆರ್ ಸಿ ಸಮಸ್ಯೆ ಕೇವಲ ಬಂಗಾಳಿಗಳಿಗೆ ಮಾತ್ರವಲ್ಲ, ಅಲ್ಪಸಂಖ್ಯಾತರು, ಹಿಂದೂಗಳು, ಬಂಗಾಳಿಗಳು, ಬಿಹಾರಿಗಳಿಗೂ ಸಮಸ್ಯೆಯಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಪಕ್ಷಕ್ಕೆ ಮತ ಚಲಾವಣೆ ಮಾಡಿದ್ದವರನ್ನು ಏಕಾಏಕಿ ಅವರದ್ದೇ ದೇಶದಲ್ಲಿ ನಿರಾಶ್ರಿತರನ್ನಾಗಿ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.